× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೭ ಟಿಪ್ಪಣಿಗಳನ್ನು ಉಳಿಸಿ ೧ [1]ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು.೨ [2]ಅದು ಮಾತ್ರವಲ್ಲ, ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.೩ [3]ಫರೋಹನು, “ನಿಮ್ಮ ಕಸುಬು ಏನು”, ಎಂದು ಕೇಳಲು ಅವರು, “ನಿಮ್ಮ ಸೇವಕರಾದ ನಾವು ನಮ್ಮ ಪೂರ್ವಜರ ಪದ್ಧತಿಯ ಮೇರೆಗೆ ಕುರಿ ಕಾಯುವವರು;೪ [4]ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.೫ [5]ಫರೋಹನು ಜೋಸೆಫನಿಗೆ, “ನಿನ್ನ ತಂದೆಯೂ ಅಣ್ಣತಮ್ಮಂದಿರು ನಿನ್ನ ಬಳಿಗೆ ಬಂದಿದ್ದಾರಲ್ಲವೆ?೬ [6]ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.೭ [7]ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.೮ [8]ಫರೋಹನು, “ನಿನಗೆಷ್ಟು ವರ್ಷ?” ಎಂದು ಕೇಳಿದನು.೯ [9]ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ೧೦ [10]ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು.೧೧ [11]ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.೧೨ [12]ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.೧೩ [13]ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು.೧೪ [14]ಜೋಸೆಫನು ಈಜಿಪ್ಟ್ ದೇಶದವರಿಗೂ ಕಾನಾನ್ ನಾಡಿಗರಿಗೂ ದವಸಧಾನ್ಯ ಮಾರಿ ಬಂದ ಹಣದಿಂದ ಫರೋಹನ ಬೊಕ್ಕಸವನ್ನು ತುಂಬಿದನು.೧೫ [15]ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು.೧೬ [16]ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು.೧೭ [17]ಅವರು ತಮ್ಮ ಪಶುಪ್ರಾಣಿಗಳನ್ನು ಜೋಸೆಫನ ಬಳಿಗೆ ತಂದರು. ಅವನು ಅವರ ಕುದುರೆಗಳನ್ನೂ ದನಕುರಿಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯ ಕೊಡಿಸಿದನು. ಹೀಗೆ ಆ ವರ್ಷ ಅವರ ಪಶುಪ್ರಾಣಿಗಳನ್ನು ಪಡೆದು, ಧಾನ್ಯಕೊಟ್ಟು ಅವರನ್ನು ಕಾಪಾಡಿದನು.೧೮ [18]ಆ ವರ್ಷ ಕಳೆದು ಮಾರನೆಯ ವರ್ಷದಲ್ಲಿ ಅವರು ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲ ವೆಚ್ಚವಾಯಿತು. ನಮ್ಮ ಪಶುಪ್ರಾಣಿಗಳು ದಣಿಯ ವಶವಾದುವು; ಇನ್ನು ಉಳಿದಿರುವುದು ನಮ್ಮ ಭೂಮಿ ಮತ್ತು ದೇಹಗಳೇ ಹೊರತು ಬೇರೇನೂ ಇಲ್ಲ; ದಣಿಗೆ ಮುಚ್ಚುಮರೆಯಿಲ್ಲದೆ ತಿಳಿಸುತ್ತಿದ್ದೇವೆ.೧೯ [19]ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.೨೦ [20]ಜೋಸೆಫ್ ಈಜಿಪ್ಟ್ ದೇಶದ ಎಲ್ಲ ಸಾಗುವಳಿ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಬರದ ಘೋರತೆಯಿಂದಾಗಿ ಈಜಿಪ್ಟಿನವರು ತಮ್ಮ ತಮ್ಮ ಹೊಲಗದ್ದೆಗಳನ್ನು ಮಾರಿಬಿಟ್ಟರು. ಹೀಗೆ ಸಾಗುವಳಿ ಭೂಮಿಯೆಲ್ಲ ಫರೋಹನದಾಯಿತು.೨೧ [21]ಈಜಿಪ್ಟಿನ ಎಲ್ಲೆಯಿಂದ ಎಲ್ಲೆಯವರೆಗೆ ಜನರನ್ನು ಊಳಿಗಕ್ಕೆ ಈಡುಮಾಡಿದನು.೨೨ [22]ಅರ್ಚಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಅವರಿಗೆ ಫರೋಹನಿಂದ ಭತ್ಯ ದೊರಕುತ್ತಿತ್ತು. ಆ ಭತ್ಯದಿಂದ ಜೀವನ ನಡೆಸುತ್ತಿದ್ದ ಆ ಅರ್ಚಕರು ತಮ್ಮ ಭೂಮಿಯನ್ನು ಮಾರಲಿಲ್ಲ.೨೩ [23]ಜೋಸೆಫನು ಪ್ರಜೆಗಳಿಗೆ, “ನಾನು ಈ ದಿನ ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ. ಭೂಮಿಯಲ್ಲಿ ಬಿತ್ತಿರಿ.೨೪ [24]ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು.೨೫ [25]ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.೨೬ [26]ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.೨೭ [27]ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.೨೮ [28]ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.೨೯ [29]ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.೩೦ [30]ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು\ ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.೩೧ [31]ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೭ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/047.mp3 50 47