× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೧೮ ಟಿಪ್ಪಣಿಗಳನ್ನು ಉಳಿಸಿ ೧ [1]ತರುವಾಯ ಅರಸನಾದ ದಾವೀದನು ತನ್ನ ಹತ್ತಿರ ಇದ್ದ ಸೈನಿಕರನ್ನು ಎಣಿಸಿ ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ನೇಮಿಸಿದನು.೨ [2]ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು.೩ [3]ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.೪ [4]ಅರಸನು, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ,” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿ, ಸಾವಿರ ಸಾವಿರ ಮಂದಿಯಾಗಿ ಹೊರಟರು.೫ [5]ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.೬ [6]ಅನಂತರ ಸೈನಿಕರು ಇಸ್ರಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಯಿಮ್ ಕಾಡಿನಲ್ಲಿ ಯುದ್ಧನಡೆಯಿತು.೭ [7]ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.೮ [8]ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.೯ [9]ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.೧೦ [10]ಇದನ್ನು ನೋಡಿದ ಒಬ್ಬ ವ್ಯಕ್ತಿ ಯೋವಾಬನಿಗೆ, “ನೋಡಿ, ಆ ಓಕ್ ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆ,” ಎಂದು ಹೇಳಿದನು.೧೧ [11]ಯೋವಾಬನು, “ನೀನು ಕಂಡಕೂಡಲೆ ಏಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ, ನಾನೇ ನಿನಗೆ ಹತ್ತು ಬೆಳ್ಳಿನಾಣ್ಯಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆ,” ಎಂದನು.೧೨ [12]ಅದಕ್ಕೆ ಆ ವ್ಯಕ್ತಿ, “ನೀವು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಇಟ್ಟರೂ ಅರಸರ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸರು ನಮ್ಮೆಲ್ಲರಿಗೆ ಕೇಳಿಸುವಂತೆ ನಿಮಗೆ, ಅಬೀಷೈಗೆ ಹಾಗು ಇತ್ತೈಗೆ, ‘ಜಾಗರೂಕತೆಯಿಂದಿರಿ! ಆ ಯುವಕ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದರಲ್ಲವೇ?೧೩ [13]ನಾನು ಅವನ ಪ್ರಾಣಕ್ಕೆ ಅಪಾಯವನ್ನು ಉಂಟುಮಾಡಿದರೆ ಅದು ಅರಸರಿಗೆ ಮರೆಯಾಗುವುದಿಲ್ಲ; ನೀವೂ ನನ್ನನ್ನು ಕೈಬಿಟ್ಟು ದೂರನಿಲ್ಲುವಿರಿ,” ಎಂದು ಉತ್ತರಕೊಟ್ಟನು.೧೪ [14]ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.೧೫ [15]ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.೧೬ [16]ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ಕಹಳೆಯನ್ನು ಊದಿಸಿದನು. ಸೈನ್ಯದವರೆಲ್ಲಾ ಇಸ್ರಯೇಲರನ್ನು ಬೆನ್ನಟ್ಟುವುದನ್ನು ಬಿಟ್ಟು ಹಿಂದಿರುಗಿದರು.೧೭ [17]ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.೧೮ [18]ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.೧೯ [19]ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.೨೦ [20]ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ೨೧ [21]ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸರಿಗೆ ತಿಳಿಸು,” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟನು.೨೨ [22]ಚಾದೋಕನ ಮಗ ಅಹೀಮಾಚನು ಪುನಃ ಯೋವಾಬನಿಗೆ, “ಆಗುವುದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಿ,” ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು, “ಮಗೂ, ಏಕೆ ಹೋಗಬೇಕೆನ್ನುತ್ತಿ? ಅದಕ್ಕಾಗಿ ನಿನಗೆ ಬಹುಮಾನವೇನೂ ಸಿಕ್ಕುವುದಿಲ್ಲ,” ಎಂದನು.೨೩ [23]ಆದರೆ ಅಹೀಮಾಚನು ಮತ್ತೊಮ್ಮೆ, “ಚಿಂತೆಯಿಲ್ಲ, ನನ್ನನ್ನೂ ಕಳುಹಿಸಿ,” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು, “ಹೋಗು,” ಎಂದು ಹೇಳಿದನು. ಆಗ ಅಹೀಮಾಚನು ಜೋರ್ಡನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.೨೪ [24]ದಾವೀದನು ಎರಡು ಬಾಗಿಲುಗಳ ಮಧ್ಯೆ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ವ್ಯಕ್ತಿಯನ್ನು ಕಂಡನು.೨೫ [25]ಅವನು ಕೂಡಲೆ ದಾವೀದನಿಗೆ ತಿಳಿಸಿದನು. ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು,” ಎಂದನು. ಆ ವ್ಯಕ್ತಿ ಬರಬರುತ್ತಾ ಸಮೀಪವಾದನು.೨೬ [26]ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ಪಾನೆ,” ಎಂದು ಅರಸನಿಗೆ ತಿಳಿಸಿದನು. ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು,” ಎಂದು ಹೇಳಿದನು.೨೭ [27]ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟ ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು; ಶುಭವರ್ತಮಾನ ತರುವವನು,” ಎಂದನು.೨೮ [28]ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.೨೯ [29]ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.೩೦ [30]ಆಗ ಅರಸನು, “ನೀನು ಇತ್ತ ನಿಲ್ಲು,” ಎಂದು ಆಜ್ಞಾಪಿಸಿದನು.; ಅವನು ಅಂತೆಯೇ ನಿಂತನು.೩೧ [31]ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.೩೨ [32]ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.೩೩ [33]ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೧೮ 00:00:00 00:00:00 0.5x 2.0x https://beblia.bible:81/BibleAudio/kannadakncl/2samuel/018.mp3 24 18