× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಅರಸುಗಳು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೧ ೨೧ ಟಿಪ್ಪಣಿಗಳನ್ನು ಉಳಿಸಿ ೧ [1]ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.೨ [2]ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.೩ [3]ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.೪ [4]ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.೫ [5]ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು.೬ [6]ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು.೭ [7]ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.೮ [8]ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.೯ [9]ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ;೧೦ [10]ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.೧೧ [11]ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.೧೨ [12]ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು;೧೩ [13]ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.೧೪ [14]ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.೧೫ [15]ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು.೧೬ [16]ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.೧೭ [17]ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು.೧೮ [18]“ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ;೧೯ [19]ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”೨೦ [20]ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.೨೧ [21]ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.೨೨ [22]ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.೨೩ [23]ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು;೨೪ [24]ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು.೨೫ [25]ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.೨೬ [26]ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.೨೭ [27]ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.೨೮ [28]ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ,೨೯ [29]“ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಅರಸುಗಳು ೧ ೨೧ 00:00:00 00:00:00 0.5x 2.0x https://beblia.bible:81/BibleAudio/kannadakncl/1kings/021.mp3 22 21