× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಅರಸುಗಳು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೨ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.೨ [2]ಆಕೆ ದೈವಪುರುಷನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವಂತನಾಡನ್ನು ಬಿಟ್ಟುಹೋಗಿ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದಳು.೩ [3]ಏಳು ವರ್ಷಗಳಾದನಂತರ ಆಕೆ ಅಲ್ಲಿಂದ ಸ್ವಂತ ನಾಡಿಗೆ ಬಂದು, ಪರರ ಕೈವಶವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು.೪ [4]ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.೫ [5]ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು.೬ [6]ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನೇ ವಿಚಾರಿಸಿದನು. ಆಕೆ ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಹೋಗಿ ಈಕೆಯ ಹೊಲಮನೆಗಳನ್ನೂ ಈಕೆ ಈ ನಾಡನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು,” ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲೇ ಕಳುಹಿಸಿದನು.೭ [7]ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,೮ [8]ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು.೯ [9]ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.೧೦ [10]ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”೧೧ [11]ಎಂದು ಹೇಳಿ ಬಿಗಿ ಮುಖದಿಂದ, ಸ್ಥಿರದೃಷ್ಟಿಯಿಂದ ಹಜಾಯೇಲನನ್ನೇ ದಿಟ್ಟಿಸಿ ನೋಡಿ ಅಳತೊಡಗಿದನು.೧೨ [12]ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.೧೩ [13]ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.೧೪ [14]ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು, “ಎಲೀಷ ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಇವನು, “ನಿಮಗೆ ಖಂಡಿತವಾಗಿ ಗುಣವಾಗುವುದೆಂದು ಹೇಳಿದರು,” ಎಂಬುದಾಗಿ ಉತ್ತರಕೊಟ್ಟನು.೧೫ [15]ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.೧೬ [16]ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಜುದೇಯದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.೧೭ [17]ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು.೧೮ [18]ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.೧೯ [19]ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.೨೦ [20]ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.೨೧ [21]ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.೨೨ [22]ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.೨೩ [23]ಯೆಹೋರಾಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಜುದೇಯದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.೨೪ [24]ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.೨೫ [25]ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಜುದೇಯದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.೨೬ [26]ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದ ವಯಸ್ಸಿನವನಾಗಿದ್ದನು. ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಯೇಲರ ಅರಸನಾದ ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ.೨೭ [27]ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.೨೮ [28]ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.೨೯ [29]ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಅರಸುಗಳು ೨ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/2kings/008.mp3 25 8