× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಎಜ್ರನು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಎಜ್ರನು ೫ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು.೨ [2]ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.೩ [3]ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.೪ [4]ಅಲ್ಲದೆ, ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವುದೆಂದು ವಿಚಾರಿಸಿದರು.೫ [5]ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.೬ [6]ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.೭ [7]ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:೮ [8]“ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.೯ [9]ಅಲ್ಲಿನ ಹಿರಿಯರನ್ನು, ‘ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?’ ಎಂದು ವಿಚಾರ ಮಾಡಿದೆವು.೧೦ [10]ಮತ್ತು ಅವರಲ್ಲಿ ಮುಖ್ಯಸ್ಥರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕಾಗಿ ಅವರ ಹೆಸರುಗಳನ್ನು ಕೇಳಿದೆವು.೧೧ [11]ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.೧೨ [12]ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.೧೩ [13]ಆದರೆ ಬಾಬಿಲೋನಿನ ಅರಸ ಸೈರಸನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಈ ದೇವಾಲಯವನ್ನು ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.೧೪ [14]ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.೧೫ [15]ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು.೧೬ [16]ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.೧೭ [17]“ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಎಜ್ರನು ೫ 00:00:00 00:00:00 0.5x 2.0x https://beblia.bible:81/BibleAudio/kannadakncl/ezra/005.mp3 10 5