× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಎಸ್ತೆರಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಎಸ್ತೆರಳು ೧ ಟಿಪ್ಪಣಿಗಳನ್ನು ಉಳಿಸಿ ೧ [1]ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.೨ [2]ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು.೩ [3]ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.೪ [4]ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.೫ [5]ಆ ದಿನಗಳು ಕಳೆದ ನಂತರ ಅರಸನು ಶೂಷನ್ ನಗರದ ನಿವಾಸಿಗಳಿಗೆ ಶ್ರೀಮಂತ-ಬಡವ ಎಂಬ ಯಾವ ಭೇದಭಾವ ಮಾಡದೆ ಎಲ್ಲರಿಗೂ ಅರಮನೆಯ ತೋಟದ ಅಂಗಳದಲ್ಲಿ ಏಳು ದಿನಗಳ ಪರಿಯಂತರ ದೊಡ್ಡ ಔತಣವನ್ನೇರ್ಪಡಿಸಿದನು.೬ [6]ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.೭ [7]ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು.೮ [8]ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.೯ [9]ವಷ್ಟಿರಾಣಿಯು, ಮಹಿಳೆಯರಿಗೋಸ್ಕರ ಅರಮನೆಯಲ್ಲಿ ಪ್ರತ್ಯೇಕ ಏರ್ಪಾಡು ಮಾಡಿಸಿದ್ದಳು.೧೦ [10]ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ೧೧ [11]ಪತ್ನಿಯ ರೂಪರಾಶಿಯನ್ನು ತನ್ನ ಪ್ರಜೆಗಳ ಹಾಗೂ ಪದಾಧಿಕಾರಿಗಳ ಮುಂದೆ ಪ್ರದರ್ಶಿಸುವ ಸಲುವಾಗಿ ರಾಜಮುಕುಟವನ್ನು ಧರಿಸಿದ ಆಕೆಯನ್ನು ರಾಜಸನ್ನಿಧಿಗೆ ಕರೆತರುವಂತೆ ಆಸ್ಥಾನ ಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳುಮಂದಿ ಕಂಚುಕಿಯರಿಗೆ ಅಪ್ಪಣೆಮಾಡಿದನು.೧೨ [12]ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.೧೩ [13]ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.೧೪ [14]ಅರಸ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಪದಾಧಿಕಾರಿಗಳೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪರ್ಷಿಯ ಮತ್ತು ಮೇದ್ಯ ದೇಶಗಳ ರಾಜಪ್ರಮುಖರು ಇದ್ದರು. ಸಮಯೋಚಿತ ವ್ಯವಹಾರ ಜ್ಞಾನಹೊಂದಿದವರಾದ ಇವರನ್ನು ಅರಸನು, ಈ ವಿಷಯವಾಗಿ ವಿಚಾರಿಸಿದನು.೧೫ [15]“ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.೧೬ [16]ಅರಸನ ಮುಂದೆಯೂ ನೆರೆದಿದ್ದ ಪದಾಧಿಕಾರಿಗಳ ಮುಂದೆಯೂ ಇದಕ್ಕೆ ಉತ್ತರ ಈಯುತ್ತ ಮೆಮೂಕನು: “ವಷ್ಟಿರಾಣಿಯು ಬಗೆದಿರುವ ಅವಮಾನ ಅರಸನೊಬ್ಬನ ವಿರುದ್ಧ ಮಾತ್ರವಲ್ಲ, ಅರಸನ ರಾಜ್ಯದಲ್ಲಿರುವ ಎಲ್ಲಾ ಪದಾಧಿಕಾರಿಗಳ ಹಾಗೂ ಪ್ರಜೆಗಳ ವಿರುದ್ಧವೂ ಆಗಿದೆ.೧೭ [17]ಹೇಗೆಂದರೆ, ವಷ್ಟಿರಾಣಿಯ ಈ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬಂದು ಅವರೂ ತಮ್ಮ ಗಂಡಂದಿರನ್ನು ತಿರಸ್ಕಾರಭಾವದಿಂದ ಕಾಣತೊಡಗುವರು. ‘ಅಹಷ್ವೇರೋಷನು ರಾಣಿ ವಷ್ಟಿಗೆ ತನ್ನ ಮುಂದೆ ಬರಲು ಹೇಳಿಕಳುಹಿಸಿದನು; ಆದರೆ ಆಕೆ ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಹೀಯಾಳಿಸುವರು.೧೮ [18]ಇದಲ್ಲದೆ, ರಾಣಿಯ ಈ ವರ್ತನೆಯ ಬಗ್ಗೆ ಕೇಳಿಸಿಕೊಂಡ ಪರ್ಷಿಯ, ಮೇದ್ಯ ದೇಶಗಳ ಕುಲೀನ ಸ್ತ್ರೀಯರೂ ಇದೇ ರೀತಿ ಅರಸರ ಪದಾಧಿಕಾರಿಗಳೊಂದಿಗೆ ವರ್ತಿಸುವರು. ಹೀಗೆ ತಿರಸ್ಕಾರವೂ ಕೋಪವೂ ಉಂಟಾಗುವುದು.೧೯ [19]ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.೨೦ [20]ಅರಸರ ಈ ನಿರ್ಣಯವು ತಮ್ಮ ಹಿರಿಯರಿಂದ ಹಿಡಿದು ಕಿರಿಯರವರೆಗೂ ಎಲ್ಲಾ ಮಹಿಳೆಯರು ತಮ್ಮ ಗಂಡಂದಿರೊಂದಿಗೆ ಗೌರವದಿಂದ ವರ್ತಿಸುವರು,” ಎಂದು ಸಲಹೆ ನೀಡಿದನು.೨೧ [21]ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು.೨೨ [22]ಪ್ರತಿಯೊಂದು ಕುಟುಂಬದಲ್ಲೂ ಪುರುಷನೇ ಅಧಿಕಾರ ವಹಿಸಬೇಕು, ಅವನು ಸ್ವಜನರ ಭಾಷೆಯಲ್ಲೇ ವ್ಯವಹಾರ ನಡೆಸಬೇಕು ಎಂದು ತನ್ನ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮುಖೇನ ಪ್ರಕಟಿಸಿದನು. ಇವು ಆಯಾ ಪ್ರಾಂತ್ಯಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲೂ ಬರೆಯಲಾದವು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಎಸ್ತೆರಳು ೧ 00:00:00 00:00:00 0.5x 2.0x https://beblia.bible:81/BibleAudio/kannadakncl/esther/001.mp3 10 1