× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ ಕನ್ನಡ ಸಮಕಾಲಿಕ ಅನುವಾದ ೨೦೨೨ಇಂಡಿಯನ್ ರಿವೈಜ್ಡ್ ವರ್ಸನ್ ೨೦೧೯ಕನ್ನಡ ಸತ್ಯವೇದವು ೨೦೧೬KNCL ೨೦೧೬BSI ೨೦೧೬ಪರಿಶುದ್ದ ಬೈಬಲ್ ೧೯೯೭1 1 1 ಎಸ್ತೆರಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ (KNCL) 2016 ಎಸ್ತೆರಳು ೯ ಟಿಪ್ಪಣಿಗಳನ್ನು ಉಳಿಸಿ ೧ [1]ಅರಸನ ಆಜ್ಞೆಯನ್ನು, ನಿರ್ಣಯವನ್ನು ನೆರವೇರಿಸತಕ್ಕ ದಿನವು ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ತಾವೇ ಸ್ವಾಧೀನಪಡಿಸಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.೨ [2]ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ.೩ [3]ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು.೪ [4]ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.೫ [5]ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು.೬ [6]ಶೂಷನ್ ನಗರದಲ್ಲೇ ಐನೂರು ಮಂದಿ ಹತರಾದರು.೭ [7]ಹತರಾದವರಲ್ಲಿ ಯೆಹೂದ್ಯರ ವೈರಿಯಾಗಿದ್ದ ಹಮ್ಮೆದಾತನ ಮಗ ಹಾಮಾನನ ಹತ್ತುಮಂದಿ ಮಕ್ಕಳೂ ಇದ್ದರು. ಅವರ ಹೆಸರುಗಳು ಯಾವುವೆಂದರೆ - ಪರ್ಷಂದಾತ, ದಲ್ಫೋನ್, ಅಸ್ಪಾತ, ಪೋರಾತ, ಅದಲ್ಯ, ಅರೀದಾತ, ಪರ್ಮಷ್ಟ, ಅರೀಸೈ, ಅರಿದೈ, ವೈಜಾತ, ಇಷ್ಟುಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.೮ [8]***೯ [9]***೧೦ [10]***೧೧ [11]ಆ ದಿನ ಶೂಷನ್ ನಗರದಲ್ಲಿ ಹತರಾದವರ ಸಂಖ್ಯೆ ಅರಸನಿಗೆ ತಿಳಿದುಬಂದಾಗ ಅವನು ಎಸ್ತೇರ್ ರಾಣಿಗೆ,೧೨ [12]“ಯೆಹೂದ್ಯರು ಶೂಷನ್ ನಗರದಲ್ಲೇ ಐನೂರು ಮಂದಿಯನ್ನು, ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ. ಉಳಿದ ರಾಜಸಂಸ್ಥಾನಗಳಲ್ಲಿ ಇನ್ನೆಷ್ಟುಮಂದಿಯನ್ನು ಹತಮಾಡಿರಬಹುದೋ! ನಿನ್ನ ವಿಜ್ಞಾಪನೆ ಯಾವುದಿದ್ದರೂ ನೆರವೇರಿಸುವೆನು ಕೇಳು, ನೀನು ಏನು ಕೇಳಿದರೂ ಕೊಡುವೆನು ಹೇಳು,” ಎಂದನು.೧೩ [13]ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು.೧೪ [14]ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.೧೫ [15]ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ.೧೬ [16]ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ.೧೭ [17]ಇದು ನಡೆದದ್ದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ. ಅವರು ಹದಿನಾಲ್ಕನೆಯ ದಿನದಂದು ವಿಶ್ರಮಿಸಿದರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.೧೮ [18]ಶೂಷನಿನ ಯೆಹೂದ್ಯರು ಹದಿಮೂರನೇ ಹಾಗೂ ಹದಿನಾಲ್ಕನೇ ದಿನ ಒಟ್ಟಾಗಿ ಸೇರಿಬಂದುದರಿಂದ, ಅವರು ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.೧೯ [19]ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.೨೦ [20]ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:೨೧ [21]‘ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆ ಮತ್ತು ಹದಿನೈದನೆಯ ದಿನಗಳನ್ನು ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮ ಎಂದು ಭಾವಿಸಬೇಕು.೨೨ [22]ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.೨೩ [23]ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾಗಿದ್ದ ಪ್ರಕಾರವೇ ಯೆಹೂದ್ಯರು ಅನುಸರಿಸಿದರು. ಅಂದಿನ ವರ್ಷ ಆಚರಿಸಿದ ಹಬ್ಬವು ತಮ್ಮಲ್ಲಿ ವಾರ್ಷಿಕ ಉತ್ಸವವಾಗಿ ಊರ್ಜಿತಗೊಳ್ಳಬೇಕೆಂದು ತೀರ್ಮಾನಿಸಿಕೊಂಡರು.೨೪ [24]ಯೆಹೂದ್ಯರೆಲ್ಲರ ಕಡುವೈರಿಯಾಗಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರನ್ನು ಅಂದರೆ ಚೀಟನ್ನು ಹಾಕಿದ್ದನು.೨೫ [25]ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.೨೬ [26]ಆ ‘ಪೂರ್’ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ‘ಪೂರಿಮ್’ ಎಂಬ ಹೆಸರು ಆಯಿತು. ಅರಸನು ಪತ್ರದಲ್ಲಿ ಬರೆದ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವೇ ಸ್ವತಃ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು,೨೭ [27]ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;೨೮ [28]ಯುಗಯುಗಾಂತರಕ್ಕೂ ಎಲ್ಲಾ ಗೋತ್ರ, ಸಂಸ್ಥಾನ, ನಗರದವರು ಈ ದಿನಗಳನ್ನು ಸ್ಮರಿಸಿ ಆಚರಿಸಬೇಕು; ಈ ಪೂರಿಮ್ ಹಬ್ಬವು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು ಹಾಗೂ ಅದರ ಸ್ಮರಣೆ ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ತೀರ್ಮಾನಿಸಿಕೊಂಡರು.೨೯ [29]ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಪೂರಿಮ್ ಹಬ್ಬದ ಆಚರಣೆಗೆ ಸಂಬಂಧಪಟ್ಟ ಆ ಎರಡನೇ ಶಾಸನವನ್ನು ದೃಢಪಡಿಸುವುದಕ್ಕಾಗಿ ಮೊರ್ದೆಕೈಯ ಸಹಾಯವನ್ನು ಪಡೆದು ಅಧಿಕೃತ ಪತ್ರಗಳನ್ನು ಬರೆದಳು.೩೦ [30]ಮೊರ್ದೆಕೈ, ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೂ ಆ ಪತ್ರಗಳನ್ನು ಕಳುಹಿಸಿದನು.೩೧ [31]ದಯೆ ಹಾಗೂ ಸತ್ಯತೆಯ ಮಾತುಗಳಿಂದ ತುಂಬಿದ್ದ ಆ ಪತ್ರಗಳಲ್ಲಿ ಎಸ್ತೇರಳು, “ಯೆಹೂದ್ಯರು ತಾವೂ ತಮ್ಮ ಸಂತತಿಯವರೆಲ್ಲರೂ ಉಪವಾಸ, ಪ್ರಲಾಪದಿನಗಳನ್ನು ಪ್ರತಿವರ್ಷ ತಪ್ಪದೆ ಆಚರಿಸಬೇಕು; ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರಿಮ್ ದಿನಗಳನ್ನು ತನ್ನ ಮತ್ತು ಯೆಹೂದ್ಯನಾದ ಮೊರ್ದಕೈಯ ಆದೇಶದಂತೆ ಪ್ರತಿವರ್ಷವೂ ನಿಯಮಿತ ಕಾಲದಲ್ಲಿ ತಪ್ಪದೆ ಆಚರಿಸಬೇಕು,” ಎಂದು ಬರೆದಿದ್ದಳು.೩೨ [32]ಎಸ್ತೇರಳು ಹೊರಡಿಸಿದ ಈ ನಿರೂಪವು ಪೂರಿಮ್ ಹಬ್ಬದ ಆಚರಣೆಯನ್ನು ಸ್ಥಾಪಿಸಿತು ಮತ್ತು ಅದು ಗ್ರಂಥದಲ್ಲೂ ಲಿಖಿತವಾಯಿತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಎಸ್ತೆರಳು ೯ 00:00:00 00:00:00 0.5x 2.0x https://beblia.bible:81/BibleAudio/kannadakncl/esther/009.mp3 10 9