× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೬೬ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?೨ [2]ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ. ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.೩ [3]“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.೪ [4]ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”೫ [5]ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು!೬ [6]ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!೭ [7]“ ‘ಪ್ರಸವವೇದನೆಗೆ ಮುಂಚೆಯೇ ಹೆರಿಗೆಯಾಯಿತು; ಪ್ರಸವವೇದನೆ ಪಡುವುದರೊಳಗೆ ಗಂಡನ್ನು ಹೆತ್ತಳು’.೮ [8]ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶವೊಂದು ಹುಟ್ಟೀತೆ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೆ? ಆದರೂ ಪ್ರಸವವೇದನೆ ತೊಡಗಿದೊಡನೆ ಸಿಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.”೯ [9]ಪ್ರಸವಕ್ಕೆ ತಂದ ನಾನು ಹೆರಲಿಕ್ಕೆ ಬಿಡದಿರುವೆನೊ?’ - ಎನ್ನುತ್ತಾರೆ ನಿಮ್ಮ ದೇವರು. ‘ಹೆರುವಂತೆ ಮಾಡುವವನಾದ ನಾನು ಗರ್ಭ ಮುಚ್ಚಿಬಿಡುವೆನೊ?’ ಎನ್ನುತ್ತಾರೆ ಸ್ವಾಮಿ ಸರ್ವೇಶ್ವರ.೧೦ [10]“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.೧೧ [11]ಆಕೆಯ ನಿಮಿತ್ತ ದುಃಖಿಸುವವರೇ, ‘ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ ತೃಪ್ತಿಗೊಳ್ಳುವೆವು, ಹೌದು, ಆಕೆಯ ಸಿರಿಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು,’ ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ.”೧೨ [12]ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.೧೩ [13]ನಾನೇ ನಿಮ್ಮನ್ನು ಸಂತೈಸುವೆನು ತಾಯಿಯಂತೆ ಸಾಂತ್ವನ ದೊರಕುವುದು ನಿಮಗೆ ಜೆರುಸಲೇಮಿನಲೆ.೧೪ [14]ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.೧೫ [15]ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ೧೬ [16]ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.೧೭ [17]“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.೧೮ [18]“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.೧೯ [19]ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.೨೦ [20]ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.೨೧ [21]ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.೨೨ [22]“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.೨೩ [23]ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್ದಿನದಿಂದ ಸಬ್ಬತ್ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.೨೪ [24]ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೬೬ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/066.mp3 66 66