× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೩೦ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ಮತ್ತೊಮ್ಮೆ ಈ ಸಂದೇಶವನ್ನು ದಯಪಾಲಿಸಿದರು:೨ [2]“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ.೩ [3]ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”೪ [4]ಸರ್ವೇಶ್ವರ ಇಸ್ರಯೇಲಿನ ಮತ್ತು ಜುದೇಯದ ವಿಷಯವಾಗಿ ಈ ಮಾತುಗಳನ್ನು ಹೇಳಿದರು:೫ [5]“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.೬ [6]ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?೭ [7]ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”೮ [8](ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.೯ [9]ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)೧೦ [10]“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.೧೧ [11]ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”೧೨ [12]ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು.೧೩ [13]ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ.೧೪ [14]ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.೧೫ [15]‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ.೧೬ [16]ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.೧೭ [17]‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.೧೮ [18]ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.೧೯ [19]ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.೨೦ [20]ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು.೨೧ [21]ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.೨೨ [22]ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.೨೩ [23]ಇಗೋ, ಹೊರಟಿದೆ ಬಡಿದುಕೊಂಡು ಹೋಗುವ ಗಾಳಿ ಸರ್ವೇಶ್ವರನ ರೋಷವೆಂಬ ಬಿರುಗಾಳಿ ದುರುಳರ ತಲೆಯ ಮೇಲೆ ಬಡಿದೋಡುವ ಸುಂಟರ ಗಾಳಿ!೨೪ [24]ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೩೦ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/030.mp3 52 30