× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ ಕನ್ನಡ ಸಮಕಾಲಿಕ ಅನುವಾದ ೨೦೨೨ಇಂಡಿಯನ್ ರಿವೈಜ್ಡ್ ವರ್ಸನ್ ೨೦೧೯ಕನ್ನಡ ಸತ್ಯವೇದವು ೨೦೧೬KNCL ೨೦೧೬BSI ೨೦೧೬ಪರಿಶುದ್ದ ಬೈಬಲ್ ೧೯೯೭1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೩೮ ಟಿಪ್ಪಣಿಗಳನ್ನು ಉಳಿಸಿ ೧ [1]ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು.೨ [2]ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.೩ [3]ಮತ್ತಾನನ ಮಗ ಶೆಫತ್ಯ, ಪಷ್ಹೂರನ ಮಗ ಗೆದಲ್ಯ, ಸೆಲೆಮ್ಯನ ಮಗ ಯೂಕಲ, ಹಾಗೂ ಮಲ್ಕೀಯನ ಮಗ ಪಷ್ಹೂರ ಇವರು ಮೇಲೆ ಹೇಳಿದ ಮಾತುಗಳನ್ನು ಕೇಳಿದರು.೪ [4]ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.೫ [5]ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.೬ [6]ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.೭ [7]ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.೮ [8]ಅವನು ಅರಮನೆಯಿಂದ ಹೊರಟು, ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಬಂದು,೯ [9]“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.೧೦ [10]ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು.೧೧ [11]ಕೂಡಲೇ ಸುಡಾನಿನ ಎಬೆದ್ಮೆಲೆಕನು ಆಳುಗಳನ್ನು ಕರೆದುಕೊಂಡು ಹೋಗಿ, ಅರಮನೆಯನ್ನು ಹೊಕ್ಕು, ಖಜಾನೆಯ ಕೆಳಗಣ ಕೋಣೆಯಿಂದ ಹಳೆಯ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು, ಹಗ್ಗಕ್ಕೆ ಕಟ್ಟಿ ಬಾವಿಯೊಳಗಿದ್ದ ಯೆರೆಮೀಯನಿಗೆ ಮುಟ್ಟಿಸಿದನು.೧೨ [12]“ಹಳೆಯ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.೧೩ [13]ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.೧೪ [14]ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.೧೫ [15]ಯೆರೆಮೀಯನು ಚಿದ್ಕೀಯನಿಗೆ, “ನಾನು ತಮಗೆ ಇದ್ದದ್ದನ್ನು ಇದ್ದಹಾಗೆ ಹೇಳಿದರೆ ತಾವು ನನ್ನನ್ನು ಕೊಂದುಹಾಕುವುದು ನಿಶ್ಚಯವಲ್ಲವೆ? ನಾನು ತಮಗೆ ಬುದ್ಧಿವಾದ ಹೇಳಿದರೆ ತಾವು ಕೇಳುವುದಿಲ್ಲ,” ಎಂದು ಉತ್ತರಕೊಟ್ಟನು.೧೬ [16]ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.೧೭ [17]ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.೧೮ [18]ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.೧೯ [19]ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.೨೦ [20]ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.೨೧ [21]ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ.೨೨ [22]ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.೨೩ [23]ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.೨೪ [24]ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ! ತಿಳಿಯದಿದ್ದರೆ ನೀನು ಸಾಯುವುದಿಲ್ಲ.೨೫ [25]ನಾನು ನಿನ್ನ ಸಂಗಡ ಮಾತಾಡಿದ ಸುದ್ದಿಯನ್ನು ಪದಾಧಿಕಾರಿಗಳು ಕೇಳಿ ನಿನ್ನ ಬಳಿಗೆ ಬಂದು, ‘ಅರಸನಿಗೆ ಏನು ಹೇಳಿದೆ? ನಮಗೆ ತಿಳಿಸು, ನಮಗೆ ಮರೆಮಾಡದೆ ತಿಳಿಸಿದರೆ ನಿನ್ನನ್ನು ಕೊಲ್ಲುವುದಿಲ್ಲ. ಅರಸನಿಗೆ ಏನು ಹೇಳಿದೆ? ತಿಳಿಸು, ಎಂದು ಪ್ರಶ್ನೆ ಹಾಕಿದರೆ೨೬ [26]ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ಮರಳಿ ಸೇರಿಸಬೇಡ. ಅಲ್ಲೇ ಸತ್ತೇನು ಎಂದು ಅರಸನಲ್ಲಿ ಬಿನ್ನಹ ಮಾಡಿಕೊಂಡೆ’ ಎಂಬುದಾಗಿ ಹೇಳು,” ಎಂದು ಅಪ್ಪಣೆಮಾಡಿದನು.೨೭ [27]ಕೆಲವು ದಿನಗಳಾದ ಮೇಲೆ ಎಲ್ಲ ಪದಾಧಿಕಾರಿಗಳು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಟ್ಟನು. ಅಷ್ಟಕ್ಕೆ ಮಾತು ಮುಗಿದು ಅವನಿಂದ ಏನೂ ತಿಳಿದುಕೊಳ್ಳಲಾಗಲಿಲ್ಲ.೨೮ [28]ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೩೮ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/038.mp3 52 38