× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೮ ಟಿಪ್ಪಣಿಗಳನ್ನು ಉಳಿಸಿ ೧ [1]“ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.೨ [2]ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ, ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.೩ [3]ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”೪ [4]ನೀನು ಅವರಿಗೆ ಹೀಗೆ ಹೇಳಬೇಕು: “ಸರ್ವೇಶ್ವರ ಇಂತೆನ್ನುತ್ತಾರೆ: ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?೫ [5]ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.೬ [6]ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ!’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.೭ [7]ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.೮ [8]‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.೯ [9]ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?೧೦ [10]ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.೧೧ [11]ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.೧೨ [12]ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.೧೩ [13]“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”೧೪ [14]ಜನರು: “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.೧೫ [15]ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.೧೬ [16]ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು!”೧೭ [17]ಸರ್ವೇಶ್ವರ: “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಬಿಡುವೆನು. ಅವು ಮಾಯಮಂತ್ರಕ್ಕೆ ಬಾಗದ ನಾಗಸರ್ಪಗಳು! ಅವು ನಿಮ್ಮನ್ನು ಕಚ್ಚದೆ ಬಿಡವು.”೧೮ [18]ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.೧೯ [19]ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ: “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ: “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”೨೦ [20]ಜನರು: “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.”೨೧ [21]ನನ್ನ ಪ್ರಜೆಯೆಂಬಾಕೆಯ ವೇದನೆಯಿಂದಲೆ ನಾನು ಅನುಭವಿಸುತ್ತಿರುವೆ ಮನೋಯಾತನೆ.೨೨ [22] ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/008.mp3 52 8