× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೬ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.೨ [2]ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.೩ [3]ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲೂ ನಾಡಿನ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಸರ್ವೇಶ್ವರನ ಸಮ್ಮುಖವಾಗಿ ಅಡ್ಡಬೀಳಲಿ.೪ [4]“ಸಬ್ಬತ್ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.೫ [5]ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ ಕುರಿಗಳೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.೬ [6]ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು.೭ [7]ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಯೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.೮ [8]“ರಾಜನು ಪ್ರವೇಶಮಾಡುವಾಗ ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಲಿ.೯ [9]ನಾಡಿನ ಜನರಾದರೋ ಹಬ್ಬಗಳಲ್ಲಿ ಸರ್ವೇಶ್ವರನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿಂದ ಆರಾಧಿಸುವುದಕ್ಕೆ ಪ್ರವೇಸಿಸಿದವರು ದಕ್ಷಿಣ ಬಾಗಿಲಿಂದ ಹೊರಡಲಿ; ದಕ್ಷಿಣ ಬಾಗಿಲಿಂದ ಪ್ರವೇಶಿಸಿದವನು ಉತ್ತರ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.೧೦ [10]ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.೧೧ [11]ರಾಜನು ಉತ್ಸವಗಳಲ್ಲೂ ಹಬ್ಬಗಳಲ್ಲೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಸಾಧ್ಯವಿದ್ದಷ್ಟು ಸೇರು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.೧೨ [12]“ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.೧೩ [13]“ನೀನು ಕಳಂಕರಹಿತವಾದ ಒಂದು ವರ್ಷದ ಕುರಿಯನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ದಿನಂಪ್ರತಿ ಅರ್ಪಿಸಬೇಕು; ಪ್ರತಿದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.೧೪ [14]ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಸರ್ವೇಶ್ವರನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತ ನಿಯಮ.೧೫ [15]ಯಾಜಕರು ಕುರಿಯನ್ನೂ ಧಾನ್ಯನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯದಹನ ಬಲಿಯಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.”೧೬ [16]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ರಾಜನು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನ ಮಾಡಿದರೆ ಅದು ತಂದೆಯ ಸೊತ್ತಾದ ಕಾರಣ ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸೊತ್ತೇ.೧೭ [17]ಆದರೆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆಮೇಲೆ ಅದು ಪುನಃ ರಾಜನ ವಶವಾಗುವುದು. ಆದರೆ ರಾಜನು ತನ್ನ ಮಕ್ಕಳಿಗೆ ಕೊಟ್ಟ ಸೊತ್ತು ಅವರಿಗೇ ಸೇರಿಬಿಡುವುದು.೧೮ [18]ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”೧೯ [19]ಬಳಿಕ ಆ ಪುರುಷ ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖನಾಗಿ ಹಾಗು ಯಾಜಕರಿಗೆ ನೇಮಕವಾಗಿ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದಲ್ಲಿ ಒಂದು ಸ್ಥಳವಿತ್ತು.೨೦ [20]ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು.೨೧ [21]ತರುವಾಯ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡುಹೋದನು. ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.೨೨ [22]ಹೌದು, ಪ್ರಾಕಾರದ ನಾಲ್ಕು ಮೂಲೆಗಳಲ್ಲೂ ಇಪ್ಪತ್ತು ಮೀಟರ್ ಉದ್ದದ, ಹದಿನೈದು ಮೀಟರ್ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.೨೩ [23]ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತುಮುತ್ತಲು ಕಲ್ಲಿನ ವರಸೆಯು ಚಾಚಿಕೊಂಡಿತ್ತು; ಆ ವರಸೆಗಳ ಕೆಳಗೆ ಒಲೆಗಳು ಸುತ್ತಲೂ ಕಟ್ಟಿದ್ದವು.೨೪ [24]ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೪೬ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/046.mp3 48 46