× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ದಾನಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ದಾನಿಯೇಲನ ೫ ಟಿಪ್ಪಣಿಗಳನ್ನು ಉಳಿಸಿ ೧ [1]ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ.೨ [2]ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ೩ [3]ಬಂಗಾರದ ಪೂಜಾ ಪಾತ್ರೆಗಳನ್ನು ತರಿಸಿದ. ರಾಜನೂ ಅವನ ಪ್ರಮುಖರೂ ಪತ್ನಿ - ಉಪಪತ್ನಿಯರೂ ಅವುಗಳಲ್ಲಿ ಕುಡಿದರು.೪ [4]ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.೫ [5]ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.೬ [6]ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.೭ [7]ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.೮ [8]ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.೯ [9]ಆಗ ರಾಜ ಬೇಲ್ಶಚ್ಚರನು ಬಹಳ ಕಳವಳಗೊಂಡನು. ಅವನ ಮುಖ ಕಳೆಗುಂದಿತು. ಅವನ ಸಾಮಂತರು ದಿಕ್ಕುತೋಚದವರಾದರು.೧೦ [10]ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.೧೧ [11]ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.೧೨ [12]ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.೧೩ [13]ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?೧೪ [14]ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.೧೫ [15]ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.೧೬ [16]ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.೧೭ [17]ಆಗ ದಾನಿಯೇಲನು ರಾಜನಿಗೆ, “ಅರಸರೇ, ನಿಮ್ಮ ದಾನಗಳು ನಿಮಗೇ ಇರಲಿ. ನಿಮ್ಮ ಬಹುಮಾನಗಳು ಮತ್ತೊಬ್ಬನಿಗೆ ದೊರಕಲಿ. ಆದರೆ ನಾನು ಈ ಬರಹವನ್ನು ಓದಿ ಅದರ ಅರ್ಥವನ್ನು ತಮಗೆ ತಿಳಿಸುವೆನು.೧೮ [18]ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.೧೯ [19]ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.೨೦ [20]ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.೨೧ [21]ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”೨೨ [22]“ಬೇಲ್ಶಚ್ಚರರೇ, ಅವರ ಕುಮಾರರಾದ ತಾವು ಇದನ್ನೆಲ್ಲ ತಿಳಿದುಕೊಂಡಿದ್ದರೂ ದೀನ ಮನಸ್ಕರಾಗದೆ ಇದ್ದೀರಿ.೨೩ [23]ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.೨೪ [24]ಹೀಗಿರಲು, ಆ ಕೈಬೆರಳು ದೇವರ ಸನ್ನಿಧಿಯಿಂದ ಬಂದು ಬರೆದಿದೆ.”೨೫ [25]“ಬರೆದಿರುವ ಮಾತುಗಳು ಇವು: ಮೆನೇ, ಮೆನೇ, ತೆಕೇಲ್, ಉಫರ್ಸಿನ್.”೨೬ [26]ಇದರ ಅರ್ಥ ಹೀಗಿದೆ: “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.೨೭ [27]'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.೨೮ [28]‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.೨೯ [29]ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.೩೦ [30]ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.೩೧ [31]ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ದಾನಿಯೇಲನ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/daniel/005.mp3 12 5