× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ದಾನಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ದಾನಿಯೇಲನ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಮೊದಲು ನನಗೆ ಕಾಣಿಸಿದ ಕನಸಲ್ಲದೆ, ಅರಸ ಬೇಲ್ಶಚ್ಚರನ ಆಳ್ವಿಕೆಯ ಮೂರನೇ ವರ್ಷದಲ್ಲಿ ದಾನಿಯೇಲನಾದ ನನಗೆ ಇನ್ನೊಂದು ಕನಸು ಕಾಣಿಸಿತು.೨ [2]ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.೩ [3]ಕಣ್ಣೆತ್ತಿ ನೋಡಿದಾಗ ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿದ್ದು ಕಾಣಿಸಿತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.೪ [4]ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.೫ [5]ನಾನು ಅದನ್ನು ಗಮನಿಸುತ್ತಿರುವಾಗಲೇ ಹೋತವೊಂದು ಪಶ್ಚಿಮದಿಂದ ಹೊರಟುಬಂದಿತು. ಅದು ಜಗವೆಲ್ಲವನ್ನು ದಾಟಿಕೊಂಡು ನೆಲವನ್ನು ಸೋಕದೆ, ಅಲ್ಲಿಗೆ ಧಾವಿಸಿತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.೬ [6]ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತ ಓಡಿತು. ಪರಾಕ್ರಮದಿಂದ ಉಬ್ಬಿ, ರೋಷಗೊಂಡು, ಅದರ ಮೇಲೆ ಬೀಳಬೇಕೆಂದು ದೌಡಾಯಿಸಿತು.೭ [7]ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.೮ [8]ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.೯ [9]ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು.೧೦ [10]ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನೂ ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.೧೧ [11]ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.೧೨ [12]ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.೧೩ [13]ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.೧೪ [14]ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.೧೫ [15]ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ತಟ್ಟನೆ ಮನುಷ್ಯ ರೂಪಹೊಂದಿದ ಒಬ್ಬನು ನನ್ನೆದುರಿಗೆ ನಿಂತನು.೧೬ [16]ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು,” ಎಂದು ಮನುಷ್ಯ ಧ್ವನಿಯಂಥ ಒಂದು ವಾಣಿ ಊಲಾ ಕಾಲುವೆಯ ನಡುವೆ ನನಗೆ ಕೇಳಿಸಿತು.೧೭ [17]ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.೧೮ [18]ಅವನು ನನ್ನೊಡನೆ ಮಾತಾಡುತ್ತಿರುವಾಗ ನಾನು ಮೈಮರೆತು ಅಧೋಮುಖವಾಗಿ ಬಿದ್ದಿದ್ದೆ. ಆಗ ಅವನು ನನ್ನನ್ನು ಮುಟ್ಟಿ, ನಿಲ್ಲಿಸಿ ನನಗೆ:೧೯ [19]“ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”೨೦ [20]“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.೨೧ [21]ಆ ಹೋತ ಗ್ರೀಕ್ ರಾಜ್ಯ. ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.೨೨ [22]ಆ ಕೊಂಬು ಮುರಿದುಹೋದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದಂತೆಯೆ ಆ ಜನಾಂಗದಿಂದ ನಾಲ್ಕು ರಾಜ್ಯಗಳು ಏಳುವುವು. ಆದರೆ ಮೊದಲನೇ ರಾಜನಿಗೆ ಇದ್ದಷ್ಟು ಶಕ್ತಿ ಅವುಗಳಿಗೆ ಇರುವುದಿಲ್ಲ.೨೩ [23]ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.೨೪ [24]ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.೨೫ [25]ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.೨೬ [26]ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.೨೭ [27]ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ದಾನಿಯೇಲನ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/daniel/008.mp3 12 8