× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಂಖ್ಯಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೯ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಯೊಂದಿಗೆ ಮಾತನಾಡಿದರು.೨ [2]ಅವರು ಹೇಳಿದ್ದು ಇದು: “ಇಸ್ರಯೇಲರು ಪಾಸ್ಕ ಹಬ್ಬವನ್ನು ನಿಯಮಿತ ಕಾಲದಲ್ಲಿ ಆಚರಿಸುವಂತೆ ಹೇಳು.೩ [3]ಈ ತಿಂಗಳಿನ ಹದಿನಾಲ್ಕನೇ ದಿನದ ಸಂಜೆ ಅದನ್ನು ಆಚರಿಸಬೇಕಾದ ನಿಯಮಿತ ವೇಳೆ. ಅದನ್ನು ಎಲ್ಲ ವಿಧಿನಿಯಮಗಳ ಪ್ರಕಾರ ಆಚರಿಸಬೇಕು.”೪ [4]ಅಂತೆಯೇ ಮೋಶೆ ಇಸ್ರಯೇಲರಿಗೆ, “ನೀವು ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿದೆ,” ಎಂದು ತಿಳಿಸಿದನು.೫ [5]ಅವರು ಅದಕ್ಕನುಗುಣವಾಗಿ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಾಸ್ಕವನ್ನು ಆಚರಿಸಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.೬ [6]ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,೭ [7]“ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು.೮ [8]ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.೯ [9]ಆಗ ಸರ್ವೇಶ್ವರ ಮೋಶೆಗೆ ಹೀಗೆಂದರು:೧೦ [10]“ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು.೧೧ [11]ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಅದನ್ನು ಆಚರಿಸಬೇಕು. ಹುಳಿಯಿಲ್ಲದ ರೊಟ್ಟಿ ಮತ್ತು ಕಹಿಯಾದ ಸೊಪ್ಪುಸದೆಗಳೊಂದಿಗೆ ಅದನ್ನು ಊಟಮಾಡಬೇಕು.೧೨ [12]ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಮಿಗಿಸಬಾರದು. ಅದರ ಒಂದು ಎಲುಬನ್ನಾದರೂ ಮುರಿಯಬಾರದು. ಪಾಸ್ಕ ಹಬ್ಬ ಕುರಿತ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.೧೩ [13]ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.೧೪ [14]ನಿಮ್ಮಲ್ಲಿ ಅನ್ಯದೇಶಿಯನೊಬ್ಬನು ಪ್ರವಾಸಿಯಾಗಿದ್ದು ಸರ್ವೇಶ್ವರನಿಗೆ ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ ಅದನ್ನು ವಿಧಿನಿಯಮಗಳ ಅನುಸಾರವೇ ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.೧೫ [15]ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.೧೬ [16]ಅದು ಸದಾ ಹಾಗೆಯೇ ಇರುತ್ತಿತ್ತು. ಆ ಮೇಘ ದೇವಸ್ಥಾನವನ್ನು ಆವರಿಸಿಕೊಳ್ಳುತ್ತಿತ್ತು; ರಾತ್ರಿವೇಳೆಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.೧೭ [17]ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.೧೮ [18]ಸರ್ವೇಶ್ವರನ ಅಪ್ಪಣೆಯನ್ನು ಹೊಂದಿಯೇ ಅವರು ಪ್ರಯಾಣ ಮಾಡುತ್ತಿದ್ದರು. ಸರ್ವೇಶ್ವರನ ಅಪ್ಪಣೆಯನ್ನು ಪಡೆದು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.೧೯ [19]ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.೨೦ [20]ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.೨೧ [21]ಕೆಲವೊಮ್ಮೆ ಆ ಮೇಘ ಸಾಯಂಕಾಲದಿಂದ ಹೊತ್ತಾರೆಯವರೆಗೆ ಇರುತ್ತಿತ್ತು. ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಕೆಲವು ಸಲ ಅದು ಹಗಲಿರುಳೂ ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.೨೨ [22]ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.೨೩ [23]ಸರ್ವೇಶ್ವರನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞೆಯ ಪ್ರಕಾರವೇ ಡೇರೆಗಳನ್ನು ಕಿತ್ತು ಹೊರಡುತ್ತಿದ್ದರು. ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ಸರ್ವೇಶ್ವರನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಸಂಖ್ಯಾಕಾಂಡ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/numbers/009.mp3 36 9