× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೩ ಟಿಪ್ಪಣಿಗಳನ್ನು ಉಳಿಸಿ ೧ [1]“ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು.೨ [2]ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.೩ [3]“ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು.೪ [4]ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.೫ [5]ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು.೬ [6]ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.೭ [7]ಪಶುಪ್ರಾಣಿಗಳನ್ನು ಮಾತ್ರ ಉಳಿಸಿ ಸ್ವಂತ ಉಪಯೋಗಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲ ಸೂರೆಮಾಡಿಬಿಟ್ಟವು.೮ [8]“ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಜೋರ್ಡನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.೯ [9](ಹೆರ್ಮೋನ್ ಪರ್ವತಕ್ಕೆ ಸಿದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದರು.)೧೦ [10]ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.೧೧ [11](ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)೧೨ [12]“ಆ ಕಾಲದಲ್ಲಿ ನಾವು ಆ ನಾಡನ್ನೆಲ್ಲ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು.೧೩ [13]ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯ ಆಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ನಾಡನ್ನೂ ಮನಸ್ಸೆಕುಲದ ಅರ್ಧ ಜನರಿಗೆ ಕೊಟ್ಟೆನು.೧೪ [14](ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).೧೫ [15]ನಾನು ಗಿಲ್ಯಾದ್ ನಾಡನ್ನು ಮಾಕೀರನಿಗೂ೧೬ [16]ಗಿಲ್ಯಾದ್ ಮೊದಲುಗೊಂಡು (ದಕ್ಷಿಣ ಕಡೆಯಲ್ಲಿ) ಅರ್ನೋನ್ ತಗ್ಗಿನವರೆಗೂ (ಪೂರ್ವ ಕಡೆಯಲ್ಲಿ) ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆ. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ದಕ್ಷಿಣ ಎಲ್ಲೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಪೂರ್ವದಿಕ್ಕಿನ ಎಲ್ಲೆ.೧೭ [17]ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.೧೮ [18]“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.೧೯ [19]ನಿಮಗೆ ಬಹಳ ದನಕುರಿಗಳುಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಸರ್ವೇಶ್ವರ ಜೋರ್ಡನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ನಾಡು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಮಡದಿ ಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.೨೦ [20]ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.೨೧ [21]“ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು.೨೨ [22]ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ.೨೩ [23]:ಆ ಕಾಲದಲ್ಲಿ ನಾನು ಸರ್ವೇಶ್ವರ ಸ್ವಾಮಿಗೆ, ‘ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಮಹತ್ವವನ್ನೂ ಭುಜಬಲವನ್ನೂ ನಿಮ್ಮ ದಾಸನಿಗೆ ತೋರಿಸಲಾರಂಭಿಸಿದಿರಿ. ನೀವು ನಡೆಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಬೇರೆ ಯಾವ ದೇವರು ತಾನೆ ನಡೆಸಬಲ್ಲನು?೨೪ [24]ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.೨೫ [25]ಆದರೆ ಸರ್ವೇಶ್ವರ ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಗೊಂಡರು. ನನ್ನ ಮನವಿಯನ್ನು ಕೇಳದೆ, ‘ಸಾಕು; ಇದರ ಬಗ್ಗೆ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಜೋರ್ಡನ್ ನದಿಯನ್ನು ದಾಟಕೂಡದು.೨೬ [26]ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ, ತುದಿಯಲ್ಲಿ ನಿಂತು, ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ನಾಡನ್ನು ಕಣ್ಣು ತುಂಬಾ ನೋಡಬಹುದು.೨೭ [27]ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.೨೮ [28]“ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ವಾಸವಾಗಿದ್ದೆವು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/003.mp3 34 3