× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಧರ್ಮೋಪದೇಷಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೯ ಟಿಪ್ಪಣಿಗಳನ್ನು ಉಳಿಸಿ ೧ [1]“ಇಸ್ರಯೇಲರೇ ಕೇಳಿ: ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.೨ [2]ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.೩ [3]ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.೪ [4]“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.೫ [5]ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.೬ [6]ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.೭ [7]“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.೮ [8]ಉದಾಹರಣೆಗೆ, ಹೋರೇಬಿನಲ್ಲಿ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಅವರು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದರು.೯ [9]ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.೧೦ [10]ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು.೧೧ [11]ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;೧೨ [12]ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.೧೩ [13]“ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;೧೪ [14]ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.೧೫ [15]ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುತ್ತಿದ್ದ ಆ ಬೆಟ್ಟದಿಂದ ಇಳಿದುಬಂದು ನೋಡಿದೆ.೧೬ [16]ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.೧೭ [17]ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮ್ಮ ಎದುರಿನಲ್ಲಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆ.೧೮ [18]“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.೧೯ [19]ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.೨೦ [20]ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ.೨೧ [21]ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.೨೨ [22]“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.೨೩ [23]ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.೨೪ [24]ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.೨೫ [25]“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.೨೬ [26]ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.೨೭ [27]ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ.೨೮ [28]ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.೨೯ [29]ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಧರ್ಮೋಪದೇಷಕಾಂಡ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/deuteronomy/009.mp3 34 9