ಬೈಬಲ್ ಆವೃತ್ತಿ ಹೋಲಿಕೆ ಮಾಡಿ

ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.
ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada Bible 2022
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ 1999, 2020, 2022 Biblica, Inc. ಅನುಮತಿಯೊಂದಿಗೆ ಬಳಸಲಾಗಿದೆ ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. Holy Bible, Kannada Contemporary Version™ 1999, 2020, 2022 by Biblica, Inc.
ಯೇಸು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada Bible IRV 2019
KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
ಆತನು ದೋಣಿಯನ್ನು ಹತ್ತಿ ಸಮುದ್ರವನ್ನು ದಾಟಿ ತನ್ನ ಊರಿಗೆ ಬಂದನು.
ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.
ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada Bible BSI 2016
Kannada J.V. Bible The Bible Society of India, 2016. Used by permission. worldwide.
ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.
ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.
Kannada Bible (KNCL) 2016
Kannada C.L. Bible - ಸತ್ಯವೇದವು C.L. 2016 by The Bible Society of India Used by permission. worldwide
ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
Kannada Bible BSI 2016
2016 by The Bible Society of India. worldwide
ಯೇಸು ದೋಣಿಯನ್ನು ಹತ್ತಿ ಸರೋವರವನ್ನು ದಾಟಿ ತನ್ನ ಸ್ವಂತ ಊರಿಗೆ ಹೋದನು.
ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
ಅಲ್ಲಿದ್ದ ಧರ್ಮೋಪದೇಶಕರು ಇದನ್ನು ಕೇಳಿ, “ಇದು ದೇವದೂಷಣೆ” ಎಂದು ತಮ್ಮೊಳಗೆ ಅಂದುಕೊಂಡರು.
Kannada Bible 1997
Kannada Holy Bible: Easy-to-Read Version 1997 Bible League International